ಕಸ್ತೂರಿ ರಂಗನ್‌ ವರದಿ ಜಾರಿಯಿಂದ ಜೀವನೋಪಾಯಕ್ಕೆ ಧಕ್ಕೆ| ಕೇಂದ್ರಕ್ಕೆ ಸಿಎಂ ಮನವರಿಕೆ!

ಬೆಂಗಳೂರು: ಪಶ್ಚಿಮ ಘಟ್ಟವನ್ನು 'ಸೂಕ್ಷ್ಮಪರಿಸರ ವಲಯ' ಎಂದು ಘೋಷಿಸುವುದರಿಂದ ಈ ಪ್ರದೇಶದಲ್ಲಿ ನೆಲೆಸಿರುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿರುವ ಕಾರಣ ಡಾ.ಕೆ. ಜಾರಿಗೆ ರಾಜ್ಯ ಸರಕಾರ ಹಾಗೂ ಈ ಭಾಗದ ಜನರ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಸ್ಪಷ್ಟವಾಗಿ ಕೇಂದ್ರ ಸರಕಾರಕ್ಕೆ ತಿಳಿಸಿದ್ದಾರೆ. ಪಶ್ಚಿಮ ಘಟ್ಟಗಳಿಗೆ ಸಂಬಂಧಪಟ್ಟಂತೆ ಡಾ.ಕೆ. ಕಸ್ತೂರಿ ರಂಗನ್‌ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್‌ ಯಾದವ್‌ ಅವರು ಶನಿವಾರ ಹೊಸದಿಲ್ಲಿಯಿಂದ ನಡೆಸಿದ ವರ್ಚುವಲ್‌ ಸಭೆಗೆ ಗೃಹ ಕಚೇರಿ 'ಕೃಷ್ಣಾ'ದಿಂದ ಪಾಲ್ಗೊಂಡಿದ್ದ ಬೊಮ್ಮಾಯಿ ಅವರು ಸರಕಾರದ ನಿಲುವನ್ನು ಸ್ಪಷ್ಟಪಡಿಸಿದರು. ಎಲ್ಲರೊಂದಿಗೆ ಸಮಾಲೋಚಿಸಿ ಕಸ್ತೂರಿ ರಂಗನ್‌ ವರದಿ ಜಾರಿಗೊಳಿಸುವುದನ್ನು ವಿರೋಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿರುವ ವಿಚಾರವನ್ನು ಸಭೆಗೆ ತಿಳಿಸಿದರು. '' ಅತಿ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ರಾಜ್ಯಗಳಲ್ಲಿಒಂದು ಎಂಬ ಹೆಗ್ಗಳಿಕೆ ಹೊಂದಿದೆ. ಸರಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಲಾಗಿದೆ. ಈ ಭಾಗದ ಜನ ಕಾನೂನು ಜಾರಿಯಾಗುವ ಮುಂಚಿನಿಂದಲೂ ಪರಿಸರಸ್ನೇಹಿ ಜೀವನ ಶೈಲಿ ರೂಢಿಸಿಕೊಂಡಿದ್ದಾರೆ. ಪಶ್ಚಿಮ ಘಟ್ಟ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ,'' ಎಂದು ಸಮರ್ಥನೆ ನೀಡಿದರು. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯಿದೆ, ಅರಣ್ಯ ಸಂರಕ್ಷಣಾ ಕಾಯಿದೆ ಸೇರಿದಂತೆ ಹಲವು ಕಾನೂನುಗಳಿಂದ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಆ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ,'' ಎಂದು ಅಭಿಪ್ರಾಯಪಟ್ಟರು. ಉಪಗ್ರಹ ಸಮೀಕ್ಷೆ ಮಿತಿ: ''ಉಪಗ್ರಹ ಸಮೀಕ್ಷೆ ಆಧಾರದಲ್ಲಿ ಕಸ್ತೂರಿ ರಂಗನ್‌ ವರದಿ ರೂಪಿಸಲಾಗಿದೆ. ಆದರೆ, ವಸ್ತುಸ್ಥಿತಿ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ,'' ಎಂದು ಸಲಹೆ ನೀಡಿದರು. ಮುಖ್ಯಮಂತ್ರಿಗಳ ವಿಚಾರಗಳನ್ನೆಲ್ಲಾ ಆಲಿಸಿದ ಭೂಪೇಂದರ್‌ ಯಾದವ್‌, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಕಾರಿಗಳು ರಾಜಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3IlUl1t

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...