ಚಿತ್ರದುರ್ಗ ಬಳಿ ಭೀಕರ ಅಪಘಾತ: ಈರುಳ್ಳಿ ಮಾರಲು ಬೆಂಗಳೂರಿಗೆ ಹೊರಟಿದ್ದ ರೈತ ಸೇರಿ ನಾಲ್ವರ ದುರ್ಮರಣ!

ರೋಣ: ಈರುಳ್ಳಿ ಮಾರಲು ತಾಲೂಕಿನ ಅರಹುಣಸಿಯಿಂದ ಬೆಂಗಳೂರಿಗೆ ಹೊರಟಿದ್ದ ರೈತ ಸೇರಿದಂತೆ ನಾಲ್ವರ ಮೇಲೆ ಟ್ಯಾಂಕರ್ ಹರಿದು ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಶನಿವಾರ ಬೆಳಗ್ಗೆ ಚಿತ್ರದುರ್ಗದ ಬಳಿ ಸಂಭವಿಸಿದೆ. ಮೃತರನ್ನು ರೋಣ ತಾಲೂಕಿನ ಅರಹುಣಸಿಯ ರೈತ ಶರಣಪ್ಪ ಅಳಗುಂಡಿ, ವಿಜಯಪುರ ಮೂಲದ ಲಾರಿ ಕ್ಲೀನರ್ ಸಂಜಯ್, ಲಿಂಗಸೂಗುರು ತಾಲೂಕಿನ ಬಯಲುಗುಡ್ಡ ಮೂಲದ ಹುಲಗಪ್ಪ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಾಳ ಮೂಲದ ಲಾರಿ ಚಾಲಕ ಮಂಜುನಾಥ್ ಬಾದವಾಡಗಿ ಎಂದು ಗುರುತಿಸಲಾಗಿದೆ. ಲಾರಿಯಲ್ಲಿ ಈರುಳ್ಳಿ ಹಾಕಿಕೊಂಡು ಬೆಂಗಳೂರಿನತ್ತ ಹೋಗುತ್ತಿರುವಾಗ ನಸುಕಿನ‌ ಜಾವ ಟೈರ್ ಪಂಕ್ಚರ್ ಆಗಿದೆ. ಹೆದ್ದಾರಿಯ ಪಕ್ಕದಲ್ಲಿ ಲಾರಿ ನಿಲ್ಲಿಸಿ ಪಂಕ್ಚರ್ ಸರಿಪಡಿಸುವ ಕೆಲಸದಲ್ಲಿ ಲಾರಿಯಲ್ಲಿದ್ದ ಐದು ಜನ ನಿರತರಾಗಿರುವಾಗ ಹಿಂಬದಿಯಿಂದ ಯಮರೂಪಿಯಾಗಿ ಬಂದ ಟ್ಯಾಂಕರ್ ಐವರ ಮೇಲೂ ಹರಿದಿದೆ. ನಾಲ್ವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಓರ್ವನ ಸ್ಥಿತಿ ತೀರಾ ಗಂಭೀರವಾಗಿದೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/3Dl7UdZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...