ಶಾಸಕ ಎಸ್‌.ಆರ್‌.ವಿಶ್ವನಾಥ್‌ ಹತ್ಯೆಗೆ ಸಂಚು ಪ್ರಕರಣ: ಕಾಂಗ್ರೆಸ್‌ ಮುಖಂಡ ಗೋಪಾಲಕೃಷ್ಣ ವಿಚಾರಣೆ!

ಯಲಹಂಕ: ಬಿಡಿಎ ಅಧ್ಯಕ್ಷ, ಶಾಸಕ ಹತ್ಯೆಗೆ ಸಂಚು ರೂಪಿಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ಅವರನ್ನು ರಾಜಾನುಕುಂಟೆ ಪೊಲೀಸರು ವಿಚಾರಣೆ ನಡೆಸಿದರು. ಶಾಸಕ ವಿಶ್ವನಾಥ್‌ ನೀಡಿರುವ ವಿಡಿಯೋ ಮತ್ತು ಆಡಿಯೋದಲ್ಲಿರುವ ತುಣುಕುಗಳನ್ನು ಗೋಪಾಲಕೃಷ್ಣರಿಗೆ ತೋರಿಸಿ, ಇದರಲ್ಲಿರುವುದು ನೀವೇನಾ? ಅದರಲ್ಲಿ ಮಾತನಾಡಿರುವ ಧ್ವನಿ ನಿಮ್ಮದೇನಾ? ನಿಮಗೆ ಕುಳ್ಳ ದೇವರಾಜು ಎಷ್ಟು ದಿನಗಳಿಂದ ಪರಿಚಯ? ಎಂಬಿತ್ಯಾದಿ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಜತೆಗೆ ಮೊದಲೇ ಸಿದ್ಧಪಡಿಸಿಕೊಂಡಿದ್ದ ಪ್ರಶ್ನೆಗಳನ್ನು ಕೇಳಿ ಉತ್ತರ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಮುಂದಿನ ವಿಚಾರಣೆಗೆ ಕರೆದಾಗ ಬರುವಂತೆ ತಿಳಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪೊಲೀಸರು ಕುಳ್ಳ ದೇವರಾಜ್‌ ಅವರನ್ನು ಬಂಧಿಸಿ, ವಿಚಾರಣೆ ನಡೆಸಿ, ನ್ಯಾಯಾಲಯದ ವಶಕ್ಕೆ ನೀಡಿದ್ದರು. ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಅದೇ ರೀತಿ ಗೋಪಾಲಕೃಷ್ಣ ನ್ಯಾಯಾಲಯಕ್ಕೆ ಹಾಜರಾಗಿ, ಷರತ್ತುಬದ್ಧ ಜಾಮೀನು ಪಡೆದಿದ್ದಾರೆ. ಮುಖಂಡರ ಮಾಹಿತಿ ನೀಡಲಿ ಈ ನಡುವೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಸಭೆಯೊಂದರಲ್ಲಿ ಮಾತನಾಡಿ, ''ವಿಡಿಯೊದಲ್ಲಿ ಮಾತಾಡಿರುವುದು ಗೋಪಾಲಕೃಷ್ಣ ಎಂಬುದು ಖಚಿತ. ತನಿಖೆ ನಂತರ ಸತ್ಯ ಹೊರಬಂದಾಗ, ಕ್ಷೇತ್ರದ ಜನತೆಗೆ ಉತ್ತರ ಹೇಳಬೇಕಾಗುತ್ತದೆ. ಬಿಜೆಪಿ ಮುಖಂಡರು ಪೋನ್‌ ಮಾಡಿ ಬೆಂಬಲಿಸಿದ್ದಾರೆ ಎಂದು ವಿಡಿಯೊದಲ್ಲಿ ಹೇಳಿದ್ದಾನೆ. ಧೈರ್ಯವಿದ್ದರೆ ಪೋನ್‌ ಮಾಡಿರುವ ಮುಖಂಡರ ಮಾಹಿತಿ ನೀಡಲಿ,'' ಎಂದು ಸವಾಲು ಹಾಕಿದ್ದಾರೆ. 2 ಗಂಟೆ ಕಾಲ ವಿಚಾರಣೆ ಶನಿವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಾಜಾನುಕುಂಟೆ ಪೊಲೀಸರು ನೋಟೀಸ್‌ ನೀಡಿದ ಹಿನ್ನೆಲೆಯಲ್ಲಿ ಗೋಪಾಲಕೃಷ್ಣ ಒಂದು ಗಂಟೆ ಮುಂಚಿತವಾಗಿ ಠಾಣೆಗೆ ಹಾಜರಾಗಿದ್ದರು. ಅವರನ್ನು ವಿಚಾರಣಾಧಿಕಾರಿ ದೊಡ್ಡಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ನಾಗರಾಜ್‌ ಅವರ ನೇತೃತ್ವದಲ್ಲಿ ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.


from India & World News in Kannada | VK Polls https://ift.tt/3pvGWLE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...