ಹೊಸಕೋಟೆ ಅರಣ್ಯ ಪ್ರದೇಶದಲ್ಲಿ ದೇಗುಲ ನಿರ್ಮಾಣಕ್ಕೆ ಯತ್ನ; ಅಧಿಕಾರಿಗಳಿಂದ ತೆರವು ಕಾರ್ಯಚರಣೆ

ಹೊಸಕೋಟೆ: ಅರಣ್ಯ ಪ್ರದೇಶಕ್ಕೆ ಸೇರುವ ಸ್ಥಳದಲ್ಲಿ ಅಕ್ರಮವಾಗಿ ದೇಗುಲ ನಿರ್ಮಾಣಕ್ಕೆ ಮುಂದಾಗಿರುವುದನ್ನು ಅರಿತ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅದನ್ನು ತೆರವು ಮಾಡಿದ್ದಾರೆ. ತಾಲೂಕಿನ ಗೊಟ್ಟಿಪುರ, ದಾಸರಹಳ್ಳಿ ಬಳಿ ಈ ಘಟನೆ ನಡೆದಿದೆ. ಅಕ್ರಮವಾಗಿ ಯಾರೇ ಅರಣ್ಯ ಪ್ರದೇಶದೊಳಗೆ ಪ್ರವೇಶಿಸಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಮುಂದಾದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಅರಣ್ಯಾಧಿಕಾರಿ ಜಗನಾಥ್‌ ರೆಡ್ಡಿ ತಿಳಿಸಿದ್ದಾರೆ. ತಾಲೂಕಿನ ಗೊಟ್ಟೀಪುರ ರಸ್ತೆಯಿಂದ ದಾಸರಹಳ್ಳಿ ಗ್ರಾಮದ ರಸ್ತೆ ಪಕ್ಕದಲ್ಲಿರುವ ಅರಣ್ಯ ಇಲಾಖೆಯ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ದೇವಾಲಯ ನಿರ್ಮಾಣ ಮಾಡಲು ಕೆಲವರು ಮುಂದಾಗಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜಿಲ್ಲಾ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ದೇಗುಲ ನಿರ್ಮಾಣ ತಡೆದು ತೆರವುಗೊಳಿಸಿದರು. ಈ ವೇಳೆ ಜಿಲ್ಲಾ ಅರಣ್ಯಾಧಿಕಾರಿ ಮಾತನಾಡಿ, ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಆದರೆ, ಕೆಲವರು ಅಕ್ರಮವಾಗಿ ನುಸುಳಿ ಮರಕ್ಕೆ ಪೂಜೆ ಸಲ್ಲಿಸಿ ಸಣ್ಣ ದೇವಾಲಯ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ದೇಗುಲ ನಿರ್ಮಾಣಕ್ಕೆ ಯತ್ನಿಸಿದ ಜಾಗದಲ್ಲಿದ್ದ ವಸ್ತುಗಳನ್ನು ತೆರವುಗೊಳಿಸಲಾಗಿದೆ. ದೇವಾಲಯ ನಿರ್ಮಾಣಕ್ಕೆ ಮುಂದಾಗಿದ್ದವರಿಗೆ ಜಾಗದ ಬಗ್ಗೆ ಬುದ್ಧಿ ಹೇಳಲಾಗಿದೆ. ಹಾಗೂ ಇದು ಕಾನೂನು ಬಾಹಿರ ಕೆಲಸವಾಗಿದ್ದು, ಇನ್ನು ಮುಂದೆ ಏನಾದರೂ ಇದೇ ರೀತಿ ಮರುಕಳಿಸಿದರೆ ಕಾನೂನಿನ ಪ್ರಕಾರ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು. ಯಾರಾದರೂ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅತಿಕ್ರಮ ಮಾಡಿದ್ದಲ್ಲಿ ಅಥವಾ ಅರಣ್ಯ ಸಂಪತ್ತಿಗೆ ನಷ್ಟವುಂಟು ಮಾಡುವ ನಿಟ್ಟಿನಲ್ಲಿ ನಡೆದು ಕೊಂಡಲ್ಲಿ ಕೂಡಲೇ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದ ಅವರು ಅರಣ್ಯ ಗಾರ್ಡ್‌ಗಳು ಈ ಬಗ್ಗೆ ಸದಾ ಎಚ್ಚರಿಕೆಯಿಂದ ಇರಬೇಕು. ಹೆಚ್ಚು ಗಸ್ತು ತಿರುಗಬೇಕು ಎಂದರು. ಈ ಸಂದರ್ಭದಲ್ಲಿ ಹೊಸಕೋಟೆ ಉಪ ವಿಭಾಗದ ವಲಯ ಅರಣ್ಯಾಧಿಕಾರಿ ಪುಷ್ಪಲತಾ ಹಾಗೂ ಸಿಬ್ಬಂದಿ ಈ ತೆರವು ಕಾರ್ಯಾಚರಣೆಯಲ್ಲಿ ಹಾಜರಿದ್ದರು.


from India & World News in Kannada | VK Polls https://ift.tt/3GicMCK

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...