ಆಫ್ರಿಕಾ ಟೆಸ್ಟ್‌ ಸರಣಿಗೆ ಅಯ್ಯರ್ ಬದಲು ಈತನನ್ನು ಪರಿಗಣಿಸಿ ಎಂದ ಬಾಂಗರ್‌!

ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಮುಂಬರುವ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡದ ಪ್ಲೇಯಿಂಗ್‌ ಇಲೆವೆನ್‌ನ ಐದನೇ ಕ್ರಮಾಂಕಕ್ಕೆ ಯುವ ಬ್ಯಾಟ್ಸ್‌ಮನ್‌ ಬದಲು ಅವರನ್ನು ಪರಿಗಣಿಸಬೇಕೆಂದು ಮಾಜಿ ಕ್ರಿಕೆಟಿಗ ಸಲಹೆ ನೀಡಿದ್ದಾರೆ. ಡಿಸೆಂಬರ್‌ 26 ರಿಂದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್‌ ಸರಣಿ ಆಡಲಿದೆ. ಈ ಹಿನ್ನೆಲೆಯಲ್ಲಿ ಟೀಮ್‌ ಇಂಡಿಯಾ ಡಿ.16ರಂದು ದಕ್ಷಿಣ ಆಫ್ರಿಕಕ್ಕೆ ಪ್ರಯಾಣ ಬೆಳೆಸಲಿದೆ. ಆದರೆ, ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಐದನೇ ಕ್ರಮಾಂಕದಲ್ಲಿ ಯಾರನ್ನು ಆಡಿಸಬೇಕೆಂಬ ತಲೆ ನೋವು ಇದೀಗ ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಶುರುವಾಗಿದೆ. ಅಂದಹಾಗೆ ಕಳೆದ ಹಲವು ವರ್ಷಗಳಿಂದ ಅಜಿಂಕ್ಯ ರಹಾನೆ ಬ್ಯಾಟಿಂಗ್ ಐದನೇ ಕ್ರಮಾಂಕದಲ್ಲಿ ಆಡಿಕೊಂಡು ಬಂದಿದ್ದಾರೆ. ಆದರೆ, ಅವರು ಇತ್ತೀಚಿನ ದಿನಗಳಲ್ಲಿ ಫಾರ್ಮ್‌ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ರನ್‌ ಗಳಿಸಲು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದಾರೆ ಹಾಗೂ ಟೆಸ್ಟ್ ತಂಡದ ಉಪ ನಾಯಕತ್ವದ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಇದರ ಹೊರತಾಗಿಯೂ ಅಜಿಂಕ್ಯ ರಹಾನೆ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆ ಮಾಡಲಾಗಿದೆ. ಆದಾಗ್ಯೂ ರಹಾನೆ ಅವರನ್ನು ಪ್ಲೇಯಿಂಗ್‌ ಇಲೆವೆನ್‌ಗೆ ಪರಿಗಣಿಸಬಾರದೆಂದು ಕ್ರಿಕೆಟ್‌ ಪಂಡಿತರು ಸೇರಿದಂತೆ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಆದರೆ, ಪದಾರ್ಪಣೆ ಟೆಸ್ಟ್‌ ಪಂದ್ಯದಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸಿದ್ದ ಶ್ರೇಯಸ್‌ ಅಯ್ಯರ್‌ ಬ್ಯಾಟಿಂಗ್‌ ಐದನೇ ಕ್ರಮಾಂಕದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಆದರೆ, ಭಾರತದ ಮಾಜಿ ಆಟಗಾರ ಸಂಜಯ್‌ ಬಾಂಗರ್‌, ಶ್ರೇಯಸ್‌ ಅಯ್ಯರ್‌ ಬದಲು ಹನುಮ ವಿಹಾರಿಯನ್ನು ಐದನೇ ಕ್ರಮಾಂಕಕ್ಕೆ ಪರಿಗಣಿಸಿ ಎಂದು ಆಗ್ರಹಿಸಿದ್ದಾರೆ. ಕಳೆದ 2018ರಲ್ಲಿ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹನುಮ ವಿಹಾರಿ ಇಲ್ಲಿಯವರೆಗೂ 12 ಪಂದ್ಯಗಳಾಡಿದ್ದಾರೆ. ಇದರಲ್ಲಿ ಅವರು 11 ವಿದೇಶಿ ಟೆಸ್ಟ್‌ ಪಂದ್ಯಗಳಿಂದ 32.84ರ ಸರಾಸರಿಯಲ್ಲಿ 624 ರನ್‌ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ ನಾಲ್ಕು ಅರ್ಧಶತಕಗಳನ್ನು ಗಳಿಸಿದ್ದಾರೆ. ಇದನ್ನು ಪರಿಗಣಿಸಿ ಹನುಮ ವಿಹಾರಿಗೆ ಪ್ಲೇಯಿಂಗ್‌ XIನಲ್ಲಿ ನಿಯಮಿತವಾಗಿ ಚಾನ್ಸ್ ನೀಡಬೇಕು ಎಂದು ಬಾಂಗರ್‌ ಹೇಳಿದ್ದಾರೆ. ಸ್ಟಾರ್‌ ಸ್ಪೋರ್ಟ್ಸ್‌ ಗೇಮ್‌ ಪ್ಲಾನ್‌ ಶೋನಲ್ಲಿ ಮಾತನಾಡಿದ ಸಂಜಯ್‌ ಬಾಂಗರ್‌, "ಶ್ರೇಯಸ್‌ ಅಯ್ಯರ್‌ ಹಾಗೂ ಹನುಮ ವಿಹಾರಿ ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಮುಂದಾದರೆ, ನಾನು ವಿಹಾರಿಯನ್ನು ಆಯ್ಕೆ ಮಾಡುತ್ತೇನೆ. ಏಕೆಂದರೆ ಅವರು ತಂಡದಲ್ಲಿ ಈಗಾಗಲೇ ಸೇವೆ ಸಲ್ಲಿಸಿದ್ದಾರೆ. ವಿದೇಶಿ ಟೆಸ್ಟ್‌ ಪಂದ್ಯಗಳಿಗೆ ಅಯ್ಯರ್‌ ಬದಲು ಆಡಲು ಅವರು ಅರ್ಹರಾಗಿದ್ದಾರೆ," ಎಂದು ಹೇಳಿದರು. ಈ ವರ್ಷಾರಂಭದಲ್ಲಿ ನಡೆದಿದ್ದ ಸಿಡ್ನಿ ಟೆಸ್ಟ್‌ ಸೋಲಿನಿಂದ ಭಾರತ ತಂಡವನ್ನು ಆರ್‌ ಅಶ್ವಿನ್‌ ಜೊತೆ ಸೇರಿ ಹನುಮ ವಿಹಾರಿ ಪಾರು ಮಾಡಿದ್ದರು ಎಂಬ ಅಂಶವನ್ನು ಇದೇ ವೇಳೆ ಸಂಜಯ್‌ ಬಾಂಗರ್‌ ಸ್ಮರಿಸಿಕೊಂಡರು. "ಹನುಮ ವಿಹಾರಿ ಅವರನ್ನು ನೀವು ನೋಡಬಹುದು. ವಿದೇಶಿ ನೆಲದಲ್ಲಿ ಅವರು ಸಾಕಷ್ಟು ಯಶಸ್ಸು ಗಳಿಸಿದ್ದಾರೆ. ವೆಸ್ಟ್ ಇಂಡೀಸ್‌ ನೆಲದಲ್ಲಿ ಅವರು ಸೆಂಚುರಿ ಬಾರಿಸಿದ್ದಾರೆ. ಅಷ್ಟೇ ಅಲ್ಲದೆ, ಆಸ್ಟ್ರೇಲಿಯಾ ವಿರುದ್ಧ ಸಿಡ್ನಿ ಟೆಸ್ಟ್‌ ಸೋಲಿನಿಂದ ಭಾರತ ತಂಡವನ್ನು ಪಾರು ಮಾಡಿದ್ದರು," ಎಂದು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ನೂತನ ಕೋಚ್‌ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದ ಭಾರತ ಟೆಸ್ಟ್‌ ತಂಡ: ವಿರಾಟ್‌ ಕೊಹ್ಲಿ(ನಾಯಕ), ಪ್ರಿಯಾಂಕ್‌ ಪಾಂಚಲ್‌, ಕೆ.ಎಲ್‌ ರಾಹುಲ್‌, ಮಯಾಂಕ್‌ ಅಗರ್ವಾಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್‌ ಅಯ್ಯರ್, ಹನುಮ ವಿಹಾರಿ, ರಿಷಭ್‌ ಪಂತ್‌(ವಿ.ಕೀ), ವೃದ್ದಿಮಾನ್‌ ಸಹಾ(ವಿ.ಕೀ), ಆರ್‌ ಅಶ್ವಿನ್, ಜಯಂತ್‌ ಯಾದವ್‌, ಇಶಾಂತ್‌ ಶರ್ಮಾ, ಮೊಹಮ್ಮದ್‌ ಶಮಿ, ಉಮೇಶ್‌vijಯಾದವ್‌, ಜಸ್‌ಪ್ರಿತ್‌ ಬುಮ್ರಾ, ಶಾರ್ದುಲ್‌ ಠಾಕೂರ್‌, ಮೊಹಮ್ಮದ್‌ ಸಿರಾಜ್‌ ಸ್ಟ್ಯಾಂಡ್ ಬೈ ಆಟಗಾರರು: ನವದೀಪ್‌ ಸೈನಿ, ಸೌರವ್‌ ಕುಮಾರ್‌, ದೀಪಕ್ ಚಹರ್‌, ಅರ್ಝಾನ್‌ ನಾಗವಾಸವಾಲ


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/3m2dVql

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...