ಸಿದ್ದರಾಮಯ್ಯ ಬಗ್ಗೆ ಗೌರವ ಇತ್ತು; ಆದರೆ ಇತ್ತೀಚಿನ ಮಾತುಗಳು ನಿರಾಶೆ ತಂದಿದೆ! ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕ ಅವರ ಬಗ್ಗೆ ಗೌರವ ಇತ್ತು. ಆದರೆ ಇತ್ತೀಚಿನ ಅವರ ಮಾತುಗಳು ನಿರಾಶೆ ತಂದಿದೆ ಎಂದು ಸಿಎಂ ಹೇಳಿದರು. ಹುಬ್ಬಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಈ ರೀತಿಯಲ್ಲಿ ತಿರುಗೇಟು ನೀಡಿದರು. “ಬಸವರಾಜ್ ಬೊಮ್ಮಾಯಿಯವರ ಬಗ್ಗೆ ನನಗೆ ಕೆಲವು ನಿರೀಕ್ಷೆಗಳಿದ್ದವು. ನಮ್ಮ ಜೊತೆ ಬೆಳೆದ ಮನುಷ್ಯ. ಬಿಜೆಪಿಯ ಸುಳ್ಳಿನ ಕಾರ್ಖಾನೆಯಲ್ಲಿ ಉತ್ಪಾದನೆಗೊಂಡ ಮನುಷ್ಯರಲ್ಲ. ನಿಜ ಮತ್ತು ನೈತಿಕತೆಯ ಆಧಾರದ ಮೇಲೆ ಆಡಳಿತ ನಡೆಸಬಹುದು, ನಮ್ಮ ಸರ್ಕಾರದ ಅವಧಿ ಮುಗಿದಾಗ ಅಭಿವೃದ್ಧಿ ಕೆಲಸಗಳು ಯಾವ ಹಂತದಲ್ಲಿದ್ದವೋ ಅಲ್ಲಿಂದ ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ಇತ್ತು. ಆದರೆ ನಮ್ಮ ನಿರೀಕ್ಷೆಗಳನ್ನೆಲ್ಲ ಸುಳ್ಳು ಮಾಡಿ ಬಿಜೆಪಿಯ ಬಹಳ ದೊಡ್ಡ ಸುಳ್ಳುಗಾರರಾಗಿ ಹೊರ ಹೊಮ್ಮುತ್ತಿರುವುದನ್ನು ನೋಡಿದರೆ, ಬೊಮ್ಮಾಯಿಯವರು ಕೆಲವೆ ದಿನಗಳಲ್ಲಿ ಜನರಿಂದ ಗೇಲಿಗೆ ಒಳಗಾಗುತ್ತಾರೆ ಎನ್ನಿಸುತ್ತಿದೆ” ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು. ಇನ್ನು ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ.ಪರಿಷತ್ ಚುನಾವಣೆಯಲ್ಲಿ ಗೆಲುವುಗೆ ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸೂಚನೆ ನೀಡಲಾಗಿದೆ. ಬೆಳಗಾವಿಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ್ ಕವಠಗಿಮಠ ಅವರ ಗೆಲವು ನಿಶ್ಚಿತ. ಅದಾಗಿಯೂ ಚುನಾವಣೆಯಲ್ಲಿ ಉತ್ತಮ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು. ಓಮಿಕ್ರಾನ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲೆಲ್ಲಿ ಸಂಶಯ ಇದೆಯೋ ಅಲ್ಲಿ ಜಿನೋಮ್ ಸ್ವೀಕ್ವೆನ್ಸಿಂಗ್ ಟೆಸ್ಟ್ ಮಾಡಲಾಗುತ್ತದೆ. ಹೆಚ್ಚಿನ ತಪಾಸಣೆಗೆ ಎನ್‌ಸಿಬಿಎಸ್‌ ಗೂ ಕೂಡಾ ಕಳಿಸುತ್ತಿದ್ದೇವೆ. ಅತೀ ಶೀಘ್ರದಲ್ಲಿ ವರದಿ ಬರುತ್ತಿದೆ. ಏನು ಸಮಸ್ಯೆ ಆಗುತ್ತಿಲ್ಲ ಎಂದರು. ಜಿನೋಮ್ ಲ್ಯಾಬ್‌ ಆರಂಭಿಸಲು ಈಗಾಗಲೇ ಕ್ರಮ ಕೈಗೊಂಡಿದ್ದೇವೆ. ಇದಕ್ಕೆ ಅಗತ್ಯವಿರುವ ಯಂತ್ರೋಪಕರಣಗಳು ಹಾಗೂ ಸಿಬ್ಬಂದಿಗಳ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.


from India & World News in Kannada | VK Polls https://ift.tt/3pCBiYx

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...