ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಮೊದಲ ಕೋವಿಡ್ ಪ್ರಕರಣ ಭಾನುವಾರ ಪತ್ತೆಯಾಗಿದೆ. ಇದರಿಂದ ದೇಶದ ಓಮಿಕ್ರಾನ್ ತಳಿ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ತಾಂಜಾನಿಯಾದಿಂದ ದಿಲ್ಲಿಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಲೋಕ ನಾಯಕ ಜಯಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಹೊಸ ತಳಿ ದೃಢಪಟ್ಟಿದೆ. ದೇಶದ ಮೊದಲ ಎರಡು ಓಮಿಕ್ರಾನ್ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿದ್ದವು. ಅವರಲ್ಲಿ ಒಬ್ಬರು ದಕ್ಷಿಣ ಆಫ್ರಿಕಾ ಪ್ರಜೆಯಾಗಿದ್ದು, ಓಮಿಕ್ರಾನ್ ಪರೀಕ್ಷೆಯ ವರದಿ ಬರುವ ಮುನ್ನವೇ ದುಬೈಗೆ ಪರಾರಿಯಾಗಿದ್ದರು. ಇನ್ನು ಎರಡು ಪ್ರಕರಣಗಳು ಶನಿವಾರ ವರದಿಯಾಗಿವೆ. ಗುಜರಾತ್ ಹಾಗೂ ಮಹಾರಾಷ್ಟ್ರಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿವೆ. ಪಾಸಿಟಿವ್ ಪತ್ತೆಯಾದ 17 ಪ್ರಯಾಣಿಕರ ಪೈಕಿ 12 ಮಂದಿಯ ಮಾದರಿಗಳನ್ನು ಜೆನೋಮ್ ಸೀಕ್ವೆನ್ಸಿಂಗ್ಗೆ ರವಾನಿಸಲಾಗಿತ್ತು. ಅವರಲ್ಲಿ ಕೆಲವು ದಿನಗಳ ಹಿಂದೆ ತಾಂಜಾನಿಯಾದಿಂದ ಬಂದಿದ್ದ ಒಬ್ಬರಲ್ಲಿ ಓಮಿಕ್ರಾನ್ ಪಾಸಿಟಿವ್ ಇರುವುದು ಪ್ರಾಥಮಿಕ ವರದಿಗಳಿಂದ ಗೊತ್ತಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ಈ ಎಲ್ಲ 17 ಮಂದಿಯನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪ್ರಯಾಣಿಕನ ಎಲ್ಲ ಪ್ರಯಾಣ ಇತಿಹಾಸಗಳನ್ನು ಸಂಗ್ರಹಿಸಲಾಗಿದೆ. ಅವರ ಸಂಪರ್ಕಿತರನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶಕ್ಕೆ ಬರುವ ಹಾಗೂ ಹೋಗುವ ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ಸ್ಥಗಿತಗೊಳಿಸುವಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇತ್ತೀಚೆಗೆ ಮನವಿ ಮಾಡಿದ್ದರು. 'ಪ್ರಧಾನಿ ಸಾಹೇಬರೇ, ದಯವಿಟ್ಟು ವಿಮಾನಗಳನ್ನು ಸ್ಥಗಿತಗೊಳಿಸಿ' ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದರು. ಅಲ್ಲದೆ, ಇದೇ ವಿಚಾರವಾಗಿ ಪ್ರಧಾನಿಗೆ ಪತ್ರ ಕೂಡ ಬರೆದಿದ್ದರು. ಮಹಾರಾಷ್ಟ್ರದ ಪ್ರಕರಣಮಹಾರಾಷ್ಟ್ರದ 33 ವರ್ಷದ ವ್ಯಕ್ತಿ ಕಳೆದ ತಿಂಗಳು ದಕ್ಷಿಣ ಆಫ್ರಿಕಾದಿಂದ ದುಬೈ ಮೂಲಕ ದಿಲ್ಲಿಗೆ ಬಂದಿದ್ದರು. ಅಲ್ಲಿಂದ ಮುಂಬಯಿಗೆ ಪ್ರಯಾಣಿಸಿದ್ದರು. ಅವರಲ್ಲಿ ಕೋವಿಡ್ 19 ಓಮಿಕ್ರಾನ್ ಪತ್ತೆಯಾಗಿದೆ. ಮರೈನ್ ಎಂಜಿನಿಯರ್ ಆಗಿರುವ ಈ ವ್ಯಕ್ತಿ, ಹಲವು ತಿಂಗಳು ಸಮುದ್ರದಲ್ಲಿಯೇ ಇದ್ದಿದ್ದರಿಂದ ಕೋವಿಡ್ ಲಸಿಕೆಯನ್ನು ಪಡೆದುಕೊಂಡಿರಲಿಲ್ಲ. ಮುಂಬಯಿಗೆ ಬಂದ ಬಳಿಕ ನ. 24ರಂದು ಅವರಲ್ಲಿ ಸಣ್ಣನೆ ಜ್ವರ ಕಾಣಿಸಿಕೊಂಡಿತ್ತು. ಅವರು ಕಲ್ಯಾಣ್- ದೊಂಬಿವಲಿಯ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
from India & World News in Kannada | VK Polls https://ift.tt/3rygsvX