ಜಾರಕಿಹೊಳಿ ಪ್ರಕರಣ: ತನಿಖಾ ವರದಿ ಸಲ್ಲಿಕೆಗೆ ಅನುಮತಿ ನೀಡುವಂತೆ ಎಸ್‌ಐಟಿ ಮನವಿ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧದ ಸಿ.ಡಿ ಪ್ರಕರಣದ ತನಿಖೆ ಮುಕ್ತಾಯಗೊಳಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ), ಅಂತಿಮ ವರದಿಯನ್ನು ವಿಚಾರಣಾ ಕೋರ್ಟ್‌ಗೆ ಸಲ್ಲಿಸಲು ಹೈಕೋರ್ಟ್‌ನ ಅನುಮತಿ ಕೋರಿದೆ. ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ್ದ ನಗರ ಪೊಲೀಸ್‌ ಆಯುಕ್ತರ ಆದೇಶವನ್ನು ವಕೀಲೆ ಗೀತಾ ಮಿಶ್ರಾ ಹಾಗೂ ಪ್ರಕರಣದ ಸಂತ್ರಸ್ತ ಯುವತಿಯು ಪ್ರಶ್ನಿಸಿದ್ದರು. ಈ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಎಸ್‌ಐಟಿ ಪರ ವಾದ ಮಂಡಿಸಿದ ಹಿರಿಯ ನ್ಯಾ. ಅಶೋಕ ಹಾರನಹಳ್ಳಿ, ''ಸಿಡಿ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ನಿರ್ಬಂಧವಿರುವ ಕಾರಣ ಅಂತಿಮ ವರದಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿಲ್ಲ. ಮಧ್ಯಂತರ ಆದೇಶ ತೆರವುಗೊಳಿಸುವಂತೆ ಕೋರಿ ಎಸ್‌ಐಟಿ ಅರ್ಜಿ ಸಲ್ಲಿಸಿದೆ. ಅದನ್ನು ಪರಿಗಣಿಸಬೇಕು,'' ಎಂದು ಕೋರಿದರು. ಯುವತಿ ಪರ ವಾದ ಮಂಡಿಸಿದ ಕಿರಿಯ ವಕೀಲರು, ''ಈ ಪ್ರಕರಣದಲ್ಲಿ ಮೊದಲಿನಿಂದಲೂ ವಾದ ಮಂಡಿಸುತ್ತಿರುವ ಸುಪ್ರೀಂ ಕೋರ್ಟ್‌ ಹಿರಿಯ ವಕೀಲೆ ಅವರು ಕೋವಿಡ್‌ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಅವರೇ ವಾದ ಮಂಡಿಸಲಿದ್ದಾರೆ. ಹೀಗಾಗಿ ವಿಚಾರಣೆ ಮುಂದೂಡಬೇಕು,'' ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಮೇಶ್‌ ಜಾರಕಿಹೊಳಿ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌, ''ಈಗಾಗಲೇ ಸಾಕಷ್ಟು ಬಾರಿ ಅನಾರೋಗ್ಯದ ಕಾರಣ ಹೇಳಿ, ಪ್ರಕರಣದಲ್ಲಿ ಅವರು ಕಾಲಾವಕಾಶ ಪಡೆದುಕೊಂಡಿದ್ದಾರೆ. ವಿಚಾರಣೆ ವಿಳಂಬವಾಗುತ್ತಿದ್ದು, ಮತ್ತೆ ಕಾಲಾವಕಾಶ ನೀಡಬಾರದು,'' ಎಂದು ಕೋರಿದರು. ವಿಚಾರಣೆಯನ್ನು ಜನವರಿ 13ಕ್ಕೆ ಮುಂದೂಡಲಾಯಿತು. ಈ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ವಿರುದ್ಧ ಎಫ್‌ಐಆರ್‌ ದಾಖಲಿಸದ ಆರೋಪಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಸೇರಿ ಮೂವರು ಪೊಲೀಸ್‌ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ನಗರದ 8ನೇ ಎಸಿಎಂಎಂ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ ಡಿಸೆಂಬರ್‌ನಲ್ಲಿ ರದ್ದುಗೊಳಿಸಿತ್ತು.


from India & World News in Kannada | VK Polls https://ift.tt/3eWmxL0

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...