ಸಂಪುಟ ಸರ್ಜರಿ ಸದ್ಯಕ್ಕಿಲ್ಲ..! ಪಂಚ ರಾಜ್ಯ ಚುನಾವಣೆ ಮಧ್ಯೆ ರಿಸ್ಕ್‌ ಬೇಡವೆಂದ ಹೈಕಮಾಂಡ್‌..!

: ಬಹು ನಿರೀಕ್ಷಿತ ಸರ್ಜರಿ ಬಿಜೆಪಿ ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದೆ. ಆದರೆ, ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ನಡೆಯಲಿರುವುದರಿಂದ ಅಭಿವೃದ್ಧಿ ಚಟುವಟಿಕೆಗೆ ವೇಗ ನೀಡುವಂತೆ ಸಿಎಂ ಅವರಿಗೆ ಹೈಕಮಾಂಡ್‌ ಸೂಚಿಸಿದೆ. ಜತೆಗೆ ಕೇಂದ್ರ ನಾಯಕತ್ವ ತಮಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೊಮ್ಮಾಯಿ ಅವರಿಗೆ ಹೈಕಮಾಂಡ್‌ ಅಭಯ ನೀಡಿದೆ. ಇದರಿಂದ ಸಹಜವಾಗಿಯೇ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ. ಆದರೆ, ಮಂತ್ರಿ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದವರಿಗೆ ಸದ್ಯಕ್ಕೆ ನಿರಾಳವಾಗುವಂತಾಗಿದೆ. ಸೋಮವಾರವೇ ದಿಲ್ಲಿಗೆ ಹೋಗಿದ್ದ ಸಿಎಂ ಬೊಮ್ಮಾಯಿ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದರು. ಮಂಗಳವಾರವೂ ರಾಜನಾಥ್‌ ಸಿಂಗ್‌ ಸೇರಿದಂತೆ ಕೇಂದ್ರದ ನಾನಾ ಸಚಿವರನ್ನು ಭೇಟಿಯಾದರು. ಇದರ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರೊಂದಿಗೆ ಫೋನ್‌ ಮೂಲಕ ಮಾತನಾಡಿದರು. 'ಪಂಚರಾಜ್ಯಗಳ ಚುನಾವಣೆ ಇರುವುದರಿಂದ ಕರ್ನಾಟಕದಲ್ಲಿ ಸದ್ಯಕ್ಕೆ ಬೇಡ. ಉತ್ತರ ಪ್ರದೇಶ ಚುನಾವಣೆಗೆ ತೆರೆ ಬೀಳುತ್ತಿದ್ದಂತೆಯೇ ಈ ಕುರಿತು ಮಾತುಕತೆ ನಡೆಸಬಹುದು' ಎಂದು ವರಿಷ್ಠರು ಸೂಚಿಸಿದರು ಎನ್ನಲಾಗಿದೆ. ಹಾಗಾಗಿ ಸಿಎಂ ಬೊಮ್ಮಾಯಿ ಕೂಡ ಮಂಗಳವಾರ ರಾತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ಬುಧವಾರ ಸಂಪುಟ ಸಭೆಯೂ ನಡೆಯಲಿದೆ. ಹಿಜಾಬ್‌ ಚರ್ಚೆ ರಾಜ್ಯದಲ್ಲಿ ಹಿಜಾಬ್‌ ವಿವಾದ ವ್ಯಾಪಕ ಸ್ವರೂಪ ಪಡೆದುಕೊಂಡಿರುವುದರಿಂದ ಈ ಬಗ್ಗೆಯೂ ವರಿಷ್ಠರು ಮಾಹಿತಿ ಪಡೆದುಕೊಂಡರು. ಈ ಸಮಸ್ಯೆಯನ್ನು ಸೌಹಾರ್ದವಾಗಿ ಇತ್ಯರ್ಥಪಡಿಸಲು ಸೂಚಿಸಿದರು. ಈ ಸಂಬಂಧ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದನ್ನು ಗಮನಕ್ಕೆ ತಂದ ಸಿಎಂ ಬೊಮ್ಮಾಯಿ, ಕಾನೂನು ಸುವ್ಯವಸ್ಥೆ ಕಾಪಾಡಲು ಸರಕಾರ ಕೈಗೊಂಡ ಕ್ರಮದ ಬಗ್ಗೆಯೂ ವಿವರ ಒದಗಿಸಿದರು ಎಂದು ತಿಳಿದು ಬಂದಿದೆ. ಒಳ್ಳೆಯ ಬಜೆಟ್‌ ಕೊಡಿ ಮುಂದಿನ ವರ್ಷ ಚುನಾವಣೆ ಇರುವುದರಿಂದ ಜನಪರ ಹಾಗೂ ಅಭಿವೃದ್ಧಿ ಪರವಾದ ಬಜೆಟ್‌ ಮಂಡಿಸಬೇಕು. ಅದು ಪಕ್ಷ ಮತ್ತು ಸರಕಾರದ ವರ್ಚಸ್ಸು ಹೆಚ್ಚಿಸುವಂತಿರಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆ ಭರವಸೆಯನ್ನು ಪೂರ್ಣ ಮಾಡುವ ನಿಟ್ಟಿನಲ್ಲಿ ಆಯವ್ಯಯ ರೂಪಿಸಬೇಕು ಎಂದು ವರಿಷ್ಠರು ಸಿಎಂ ಅವರಿಗೆ ಸಲಹೆ ನೀಡಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ 'ಬಜೆಟ್‌ ಸೇರಿದಂತೆ ರಾಜ್ಯ ಸರಕಾರದ ಕಾರ್ಯಕ್ರಮಗಳೆಲ್ಲವೂ ಸಕಾಲದಲ್ಲಿ ಜನರಿಗೆ ತಲುಪಬೇಕು ಎಂದು ಅಮಿತ್‌ ಶಾ ಅವರ ಭೇಟಿ ಸಂದರ್ಭದಲ್ಲಿ ಹೇಳಿದ್ದಾರೆ' ಎಂದಿದ್ದಾರೆ. ಈ ನಡುವೆ ಬಿಬಿಎಂಪಿ, ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ಮಾಡಿಕೊಳ್ಳುವುದಕ್ಕೂ ಕೇಂದ್ರ ನಾಯಕರು ಒಪ್ಪಿಗೆ ನೀಡಿದ್ದಾರೆ. ಹೈಕಮಾಂಡ್‌ ಮುಂದೂಡಿದ್ದೇಕೆ? ಚುನಾವಣೆ ದೃಷ್ಟಿ ಇಟ್ಟುಕೊಂಡು ರಾಜ್ಯ ಸಂಪುಟಕ್ಕೆ ಮೇಜರ್‌ ಸರ್ಜರಿ ಮಾಡುವುದು ಹೈಕಮಾಂಡ್‌ ಆಲೋಚನೆ. ಪಂಚ ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಈ ಪ್ರಕ್ರಿಯೆ ಸಂಬಂಧ ವಿಸ್ತೃತ ಸಮಾಲೋಚನೆಗೆ ಸಮಯವಿಲ್ಲ. ಒಂದು ವೇಳೆ ಸಂಪುಟದಲ್ಲಿ ಖಾಲಿಯಿರುವ ಸ್ಥಾನ ಭರ್ತಿ ಮಾಡಲು ಒಪ್ಪಿಗೆ ಕೊಟ್ಟರೂ ಅದರಿಂದ ಉಂಟಾಗುವ ಅಸಮಾಧಾನ ತಣಿಸುವುದು ಸವಾಲಾಗುತ್ತದೆ. ಬೇರೆ ರಾಜ್ಯಗಳಲ್ಲಿ ಚುನಾವಣೆ ಇರುವಾಗ ಇಂಥ ಉಸಾಬರಿ ಬೇಡ ಎನ್ನುವುದು ಹೈಕಮಾಂಡ್‌ ನಿಲುವಾಗಿದೆ.


from India & World News in Kannada | VK Polls https://ift.tt/wRvYy4p

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...