Hijab Controversy: ಶಿಕ್ಷಣದಲ್ಲಿ ವಿಷ ತುಂಬಬೇಡಿ: ಬಿಜೆಪಿ- ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಗುಡುಗು

ಬೆಂಗಳೂರು: ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಆರಂಭಿಸಿದ ಬೇಟಿ ಬಚಾವೋ ಬೇಟಿ ಪಢಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದರು. ನಗರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿ,''ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್‌ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ,'' ಎಂದು ಅರೋಪಿಸಿದರು. ''ಕೋವಿಡ್‌ ಕಾಲದಲ್ಲಿ ಶಾಲೆಗಳು ಸರಿಯಾಗಿ ನಡೆದಿಲ್ಲ ಎಂದು ವಿಧ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಅನಗತ್ಯ ಸೃಷ್ಟಿ ಮಾಡಲಾಗಿದೆ,''ಎಂದು ಅಸಮಾಧಾನ ವ್ಯಕ್ತಪಡಿಸಿದರು. ''ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸಿದ್ದರೆ ರಾಷ್ಟ್ರೀಯ ಪಕ್ಷಗಳ ನಾಯಕರು ಹಿಜಾಬ್‌ ಮತ್ತು ಕೇಸರಿ ಶಾಲುಗಳ ವಿಷಯವನ್ನು ಇಲ್ಲಿಗೆ ಬಿಡಲಿ,'' ಎಂದು ತಾಕೀತು ಮಾಡಿದರು. ''ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಶಿಕ್ಷಣದಲ್ಲಿ ವಿಷ ತುಂಬುವುದು ಬೇಡ. ಮುಖ್ಯಮಂತ್ರಿಗಳು ಇಂಥ ಸೂಕ್ಷ್ಮ ವಿಷಯ ಬೆಳೆಯಲು ಬಿಡದೇ ಸರಿಯಾಗಿ ನಿಭಾಯಿಸಬೇಕು,''ಎಂದು ಹೇಳಿದರು. ಸಿಎಂ ಆಗುವ ಹುಚ್ಚು: ಡಿಕೆಶಿ- ವಿರುದ್ಧ ವಾಗ್ದಾಳಿಸಿದ್ದರಾಮಯ್ಯ ಮತ್ತು ಇಬ್ಬರಿಗೂ ಮುಖ್ಯಮಂತ್ರಿ ಆಗುವ ಹುಚ್ಚು ಹಿಡಿದಿದೆ. ಇಬ್ಬರಿಗೂ ಓಟು ಪಡೆಯುವ ಹುಚ್ಚು ಹೆಚ್ಚಾಗಿದೆ. ಸಮಾಜಕ್ಕೆ ಒಳ್ಳೆಯದಾಗಲಿ ಎಂಬ ಮನಸ್ಥಿತಿ ಇಬ್ಬರಲ್ಲಿಯೂ ಇಲ್ಲ. ಬಿಜೆಪಿಯವರಿಗೆ ಕೂಡ ಓಟು ಪಡೆಯುವ ಹುಚ್ಚು ಜಾಸ್ತಿಯಾಗಿದೆ. ಸಿದ್ದರಾಮಯ್ಯ ಒಂದು ಮಾಡು ಆಡಿದರೆ, ಡಿಕೆ ಶಿವಕುಮಾರ್ ಇನ್ನೊಂದು ಮಾತು ಹೇಳುತ್ತಾರೆ. ಇವರಲ್ಲಿ ಒಬ್ಬರಿಗೆ ಮುಸ್ಲಿಮರ ಮತಗಳನ್ನು ಪಡೆಯುವ ಬಯಕೆ ಜೋರಾಗಿದೆ. ಇನ್ನೊಬ್ಬರಿಗೆ ಮುಸ್ಲಿಮರ ಪರ ಮಾತನಾಡಿದರೆ ಇನ್ನೇನು ಹೆಚ್ಚು ಕಡಿಮೆ ಆಗುತ್ತದೆಯೋ ಎಂಬ ಭಯವೂ ಇದೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು. ಕಾಂಗ್ರೆಸ್ ತೊರೆಯುವ ಮೂಲಕ ಸಿಎಂ ಇಬ್ರಾಹಿಂ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಸ್ವಾಗತಿಸಿದರು. ಇಬ್ರಾಹಿಂ ಅವರು ಮೊದಲಿನಿಂದಲೂ ಜೆಡಿಎಸ್ ಜತೆ ಗುರುತಿಸಿಕೊಂಡಿದ್ದವರು. ಈ ಮಧ್ಯೆ ಕೆಲವು ವ್ಯತ್ಯಾಸಗಳು ಆಗಿದ್ದವು. ಈಗ ಅವರು ಮತ್ತೆ ಜೆಡಿಎಸ್ ಜತೆ ಸೇರಿಕೊಂಡು ಮತ್ತೊಂದು ರಂಗ ರಚನೆಗೆ ಮುಂದಾದರೆ ಅದನ್ನು ಸ್ವಾಗತಿಸುತ್ತೇನೆ ಎಂದರು.


from India & World News in Kannada | VK Polls https://ift.tt/BN5Oz26

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...