ಅವಕಾಶ ಸಿಕ್ಕರೆ ಸಾಕು ಎಂಎಸ್ ಧೋನಿ ವಿರುದ್ಧ ಟೀಕೆಗಳ ಸುರಿ ಮಳೆ ಹರಿಸಲು ಸದಾ ಮುಂದಿರುತ್ತಿದ್ದ ಟೀಮ್ ಇಂಡಿಯಾದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಈಗ ಯೂ ಟರ್ನ್ ಹೊಡೆದು ಅಚ್ಚರಿ ಮೂಡಿಸಿದ್ದಾರೆ. ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಕೋಚಿಂಗ್ ಅಭಿಯಾನ ಆರಂಭಿಸುತ್ತಿರುವ ಗಂಭೀರ್, ಲಖನೌ ಸೂಪರ್ ಜಯಂಟ್ಸ್ ತಂಡದ ಪರ ಮೆಂಟರ್ ಆಗಿ ಕೆಲಸ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ನೀಡಿರುವ ಸಂದರ್ಶನ ಒಂದರಲ್ಲಿ ಎಂಎಸ್ ಧೋನಿ ಬಗ್ಗೆ ಗುಣಗಾನ ಮಾಡಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/MJ8pAcn