ಅಡುಗೆ ಅನಿಲದ ದರ ಹೆಚ್ಚಳದಿಂದಾಗಿ ಹೊಗೆ ರಹಿತ ಅಡುಗೆ ಮನೆಯ ಕನಸು ಬಿತ್ತಿದ್ದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ಹಿನ್ನಡೆ ಉಂಟಾಗಿದೆ. ವಿಪರೀತ ಬೆಲೆ ಏರಿಕೆಯಿಂದಾಗಿ ಗ್ರಾಮೀಣ ಭಾಗದ ಮಹಿಳೆಯರು ನಿಧಾನವಾಗಿ ಸೌದೆಯ ಒಲೆಯ ಕಡೆಗೆ ಮುಖ ಮಾಡುತ್ತಿದ್ದಾರೆ. ಹಳ್ಳಿಗಳ ಗೃಹಿಣಿಯರು ಮತ್ತು ಪುರುಷರು ಈಗ ಬೆಳಗಾಗುತ್ತಲೇ ಉರುವಲು ಸೌದೆಯ ಹೊರೆ ತರುವ ಕೆಲಸದಲ್ಲಿ ಮಗ್ನರಾಗಿದ್ದಾರೆ.
from India & World News in Kannada | VK Polls https://ift.tt/gnfEokY