ಉತ್ತರ ಕನ್ನಡ ಜಿಲ್ಲೆಯ ಕಾರವಾರ ವ್ಯಾಪ್ತಿಯ ಅರಬ್ಬಿ ಸಮುದ್ರದಲ್ಲಿ ದುರಸ್ತಿಯ ನಂತರದ ಕಡಲ ಪ್ರಯೋಗದಲ್ಲಿದ್ದ ಯುದ್ಧವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬುಧವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ವಿಕ್ರಮಾದಿತ್ಯದ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಕೆಲವು ತಿಂಗಳುಗಳಿಂದ ನೌಕೆ ಬಳಕೆಯಲ್ಲಿರಲಿಲ್ಲ. ದುರಸ್ತಿ ಕಾರ್ಯ ಪೂರ್ಣಗೊಳಿಸಿ ಬುಧವಾರ ಸಮುದ್ರಲ್ಲಿ ಪ್ರಯೋಗಾರ್ಥ ಕಾರ್ಯಾಚರಣೆಗಳನ್ನು ನಡೆಸುವ ವೇಳೆ ಇದ್ದಕ್ಕಿದ್ದಂತೆ ನೌಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ನೌಕಾ ಸಿಬ್ಬಂದಿ ಒಮ್ಮೆಲೆ ಆತಂಕಿತರಾದರೂ, ಯುದ್ಧನೌಕೆಯಲ್ಲಿ ಅಳವಡಿಸಲಾದ ಅಗ್ನಿಶಾಮಕ ವ್ಯವಸ್ಥೆಯ ಸಹಕಾರದಿಂದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
from India & World News in Kannada | VK Polls https://ift.tt/4CoxXEb