ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’ಗೆ ನಿರ್ದಿಷ್ಟ ಸಮಯ ಹಾಗೂ ಧಾಟಿ ನಿಗದಿ ಮಾಡುವ ವಿಚಾರ ಕೊನೆಗೂ ಇತ್ಯರ್ಥಗೊಂಡಿದೆ. ಇದರಿಂದ 18 ವರ್ಷಗಳ ಗೊಂದಲಕ್ಕೆ ರಾಜ್ಯ ಸರಕಾರ ಈಗ ಪೂರ್ಣ ವಿರಾಮ ಹಾಕಿದೆ. ಯಾವುದೇ ಆಲಾಪ ಹಾಗೂ ಪುನಾರವರ್ತನೆ ಇಲ್ಲದಂತೆ 150 ಸೆಕೆಂಡ್ ಗಳಲ್ಲಿ ನಾಡಗೀತೆಯನ್ನು ಹಾಡಲು ಸಾಧ್ಯ ಎಂದು ಮೈಸೂರಿನ ಸಂಗೀತ ವಿದುಷಿ ಎಚ್.ಆರ್. ಲೀಲಾವತಿ ಅಧ್ಯಕ್ಷತೆಯ ಸಮಿತಿ ಮಾಡಿದ್ದ ಶಿಫಾರಸ್ಸಿನ ಅನ್ವಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
from India & World News in Kannada | VK Polls https://ift.tt/aOutAws