ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಯಲ್ಲಿ ರೈತರು ರೇಷ್ಮೆ ಬೆಳೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಜಿಲ್ಲೆಗಳಲ್ಲಿ ರೇಷ್ಮೆ ರೈತರ ಕೈಹಿಡಿದಿದೆ. ಜಿಲ್ಲೆಯಲ್ಲಿ ವ್ಯಾಪಾಕ ಮಳೆ ರೇಷ್ಮೆ ಬೆಳೆಯ ಮೇಲೆ ಪರಿಣಾಮ ಬೀರುವಂತೆ ಮಾಡಿದೆ. ಇದರಿಂದ ಗೂಡುಗಳ ಸಂಖ್ಯೆ ಇಳಿಕೆ ಕಂಡಿದ್ದು, ಮಾರುಕಟ್ಟೆಯಲ್ಲಿ ಗೂಡುಗಳಿಗೆ ಉತ್ತಮ ದರವಿದೆ. ಆದರೆ, ಇದರ ಪ್ರಯೋಜನ ರೈತರಿಗೆ ಸಿಗುತ್ತಿಲ್ಲ. ರೇಷ್ಮೆ ಉತ್ಪಾದನೆ ಕುಂಠಿತವಾದ ಹಿನ್ನೆಲೆ ದರ ಇದ್ದರೂ ರೈತರಿಗೆ ಲಾಭವಿಲ್ಲದಂತಾಗಿದೆ.
from India & World News in Kannada | VK Polls https://ift.tt/d5bF0u2