ಕಲಿಮುಲ್ಲಾರನ್ನ ವಶಕ್ಕೆ ಪಡೆದಿರೋ ವಿಚಾರ ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಪಿಎಫ್ಐ,ಎಸ್ಡಿಪಿಐ ಸಂಘಟನೆಯ ಮನೆ ಮೇಲೆ ಎನ್ ಐಎ ದಾಳಿ ವಿಚಾರಕ್ಕೆ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಮನೆಯ ಮೇಲೆ ತಡ ರಾತ್ರಿ ಏಕಾಏಕಿ ಎನ್ಐಎ ಅಧಿಕಾರಿಗಳು ಅಂಥ ಬಂದು ದಾಳಿ ಮಾಡಿದರು. ನಮ್ಮ ಮನೆಯನ್ನೆಲ್ಲ ಹುಡುಕಾಟ ಮಾಡಿ ನಮ್ಮ ಮನೆಯಲ್ಲಿದ್ದ ಕೆಲ ದಾಖಲೆಯನ್ನು ವಶಪಡಿಸಿಕೊಂಡರು . ನಮ್ಮ ಭಾವನವರನ್ನು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ನಮ್ಮ ಭಾವ ಅವರು ಯಾವುದೇ ರೀತಿಯ ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದಿದ್ದಾರೆ.
from India & World News in Kannada | VK Polls https://ift.tt/MhPxz9i