ಸದನದಲ್ಲಿ ಮಂಡನೆಯಾಗಿರುವ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022'ರಲ್ಲಿದ್ದ ದಂಡ ವಿಚಾರ, ಜಾರಿ ನಿರ್ದೇಶನ ವ್ಯವಸ್ಥೆ ಅಂಶಗಳಲ್ಲಿ ಲೋಪವಿದೆ. ಹೀಗಾಗಿ, ಇದನ್ನು ಮರುಪರಿಶೀಲಿಸಿ, ನಂತರ ಕಾನೂನಾಗಿ ಜಾರಿಗೊಳಿಸಬೇಕು. ಜತೆಗೆ, ಈ ವಿಧೇಯಕದ ಅನುಮೋದನೆಯಲ್ಲಿಕನ್ನಡ ಸಾಹಿತ್ಯ ಪರಿಷತ್ತಿನ ಸಲಹೆ, ನಿರ್ಣಯಗಳಿಗೆ ಆದ್ಯತೆ ನೀಡಬೇಕು,''ಎಂದು ಸಾಹಿತಿಗಳಾದ ಚಂದ್ರಶೇಖರ ಕಂಬಾರ, ಎಸ್.ಎಲ್.ಭೈರಪ್ಪ, ಡಾ.ದೊಡ್ಡರಂಗೇಗೌಡ ಸೇರಿದಂತೆ ಹಲವು ಸಾಹಿತಿಗಳು, ಮಠಾಧಿಪತಿಗಳು, ಅನೇಕ ಕ್ಷೇತ್ರಗಳ ಗಣ್ಯರು ಒಕ್ಕೊರಲಿನಿಂದ ಒತ್ತಾಯಿಸಿದ್ದಾರೆ.
from India & World News in Kannada | VK Polls https://ift.tt/xR3EHAc