ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳ ಗೋಳು ಕೇಳೋರೇ ಇಲ್ಲದಂತಾಗಿದೆ. ರೈತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಯೋಜನೆಗೆ ಅನುದಾನದ ಕೊರತೆ ಎದುರಾಗಿದೆ. ಅನುದಾನ ಬಿಡುಗಡೆಗೆ ಒತ್ತಾಯಿಸಿ ಕಚೇರಿ ಕಚೇರಿ ಅಲೆದರೂ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಮನೆಯ ಯಜಮಾನನಿಲ್ಲದೆ ಕುಟುಂಬ ನಿರ್ವಹಣೆಯೇ ಕಷ್ಟ. ಅದರ ಮಧ್ಯೆ ಮಕ್ಕಳ ಶಿಕ್ಷಣ ಹೇಗೇ ಅನ್ನೋದೇ ದೊಡ್ಡ ಸಮಸ್ಯೆಯಾಗಿದೆ. ಒಂದೆಡೆ ಪ್ರಚಾರದ ಕೊರತೆ ಮತ್ತು ಪ್ರತಿ ವರ್ಷ ದಾಖಲೆ ಸಲ್ಲಿಸಬೇಕಿರುವುದರಿಂದ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಫಲಾನುಭವಿಗಳನ್ನು ತಲುಪಿಲ್ಲ.
from India & World News in Kannada | VK Polls https://ift.tt/QZsUgTM