Lokayukta Arrest Madal Virupakshappa: ಲಂಚ ಪಡೆದ ಪ್ರಕರಣದಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬೆನ್ನಲ್ಲಿಯೇ ಶಾಸಕರನ್ನು ಲೋಕಾಯುಕ್ತರು ಬಂಧಿಸಿದ್ದಾರೆ. ಆದರೆ, ಬಂಧನದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ, ನಾನು ಹೃದ್ರೋಗಿಯಾಗಿದ್ದು, ನನಗೆ ಬಹಳ ಎದೆ ನೋವು ಬರುತ್ತಿದೆ ಎಂದು ಹೈಡ್ರಾಮಾ ಮಾಡಿದ್ದಾರೆ. ಆದ್ದರಿಂದ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಬೇಕಾಯಿತು. ಆರೋಗ್ಯ ತಪಾಸಣೆ ಬಳಿಕ ವಿಚಾರಣೆ ಮುದುವರೆಸಲಾಗಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/TqbALmy