ಬೆಂಗಳೂರು : ನೂತನ ಸರಕಾರದಿಂದ ರಾಜ್ಯದ ಜನತೆ ಕಾತರದಿಂದ ನಿರೀಕ್ಷಿಸುತ್ತಿರುವ 'ಗ್ಯಾರಂಟಿ' ಯೋಜನೆಗಳ ಜಾರಿ ಸಂಬಂಧ ಜೂ.2ರ ಶುಕ್ರವಾರ ಮಹತ್ವದ ತೀರ್ಮಾನ ಹೊರಬೀಳಲಿದೆ. 200 ಯೂನಿಟ್ ಉಚಿತ ವಿದ್ಯುತ್ ಪೂರೈಸುವ 'ಗೃಹ ಜ್ಯೋತಿ', ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡುವ 'ಅನ್ನಭಾಗ್ಯ' ಹಾಗೂ ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿಉಚಿತ ಪ್ರಯಾಣದ 'ಶಕ್ತಿ' ಈ ಮೂರು ಯೋಜನೆಗಳ ಅನುಷ್ಠಾನಕ್ಕೆ ಷರತ್ತು ಮತ್ತು ಮಾನದಂಡ ಸಹಿತದ ತೀರ್ಮಾನ ಸಚಿವ ಸಂಪುಟ ಸಭೆ ಬಳಿಕ ಪ್ರಕಟವಾಗಲಿದೆ.ಆದರೆ, ಪಂಚ ಗ್ಯಾರಂಟಿಯಲ್ಲಿ ಪ್ರಮುಖವಾದ 'ಗೃಹ ಲಕ್ಷ್ಮಿ' ಯೋಜನೆಯಡಿ ಮಾಸಿಕ 2,000 ರೂ. ಪಡೆಯಲು ಮನೆಯ ಒಡತಿಯರು ಇನ್ನೂ ಎರಡು-ಮೂರು ತಿಂಗಳು ಕಾಯಲೇಬೇಕು. ಆಗಸ್ಟ್ನ ವರಮಹಾಲಕ್ಷ್ಮಿ ವ್ರತ ಅಥವಾ ಸೆಪ್ಟೆಂಬರ್ನಲ್ಲಿ ಬರುವ ಗೌರಿ ಹಬ್ಬದಂದು ಬಾಗಿನ ರೂಪದಲ್ಲಿ'ಗೃಹ ಲಕ್ಷ್ಮಿ' ಮಹಿಳೆಯರ ಕೈಸೇರಲಿದೆ. ಉದ್ಯೋಗ ಸಿಗದ ಯುವಜನರ ದತ್ತಾಂಶ ಸಂಗ್ರಹಕ್ಕೆ ಕಾಲಾವಕಾಶದ ಅಗತ್ಯವಿರುವ ಕಾರಣಕ್ಕೆ 'ಯುವ ನಿಧಿ' ಯೋಜನೆಯೂ ಬಹುತೇಕ ಮೂರು ತಿಂಗಳ ಬಳಿಕವೇ ಜಾರಿಯಾಗಲಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/s7Nk0IS
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...