ಬೆಂಗಳೂರು: ಭಾನುವಾರ ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 6 ವಿಕೆಟ್ಗಳಿಂದ ಸೋಲು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದ ಹೊರಬಿದ್ದಿತು. ಟೂರ್ನಿಯ ಆರಂಭಕ್ಕೂ ಮುನ್ನ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದ್ದ ಆರ್ಸಿಬಿ, ಐಪಿಎಲ್ ಪ್ಲೇಆಫ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಯಿತು. ಐಪಿಎಲ್ ಪ್ಲೇಆಫ್ಗೆ ಅರ್ಹತೆ ಪಡೆಯುವ ಸಲುವಾಗಿ ಆರ್ಸಿಬಿ, ಭಾನುವಾರ ಗುಜರಾತ್ ಟೈಟನ್ಸ್ ವಿರುದ್ಧ ಗೆಲುವು ಪಡೆಯಬೇಕಾಗಿತ್ತು. ಆದರೆ, ಬೌಲಿಂಗ್ ವೈಫಲ್ಯದಿಂದ ಆರ್ಸಿಬಿ ಈ ಪಂದ್ಯದಲ್ಲಿ ಸೋಲು ಅನುಭವಿಸಬೇಕಾಯಿತು. ಆರ್ಸಿಬಿ ಸೋಲಿನಿಂದ ಮುಂಬೈ ಇಂಡಿಯನ್ಸ್ 16 ಅಂಕಗಳೊಂದಿಗೆ ಐಪಿಎಲ್ ಪ್ಲೇಆಫ್ಗೆ ಅಧಿಕೃತವಾಗಿ ಅರ್ಹತೆ ಪಡೆಯಿತು.ಅಂದಹಾಗೆ ಗುಜರಾತ್ ಟೈಟನ್ಸ್ ವಿರುದ್ಧ ವಿರಾಟ್ ಕೊಹ್ಲಿ ಹೊರತು ಪಡಿಸಿ ಇನ್ನುಳಿದ ಬ್ಯಾಟ್ಸ್ಮನ್ಗಳು ವೈಫಲ್ಯ ಅನುಭವಿಸಿದರು. ಮಿಂಚಿನ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ, 61 ಎಸೆತಗಳಲ್ಲಿ ಒಂದು ಸಿಕ್ಸರ್ ಹಾಗೂ 13 ಬೌಂಡರಿಗಳೊಂದಿಗೆ ಅಜೇಯ 101 ರನ್ ಸಿಡಿಸಿದ್ದರು. ಆ ಮೂಲಕ ಪ್ರಸಕ್ತ ಆವೃತ್ತಿಯಲ್ಲಿ ಎರಡನೇ ಹಾಗೂ ಒಟ್ಟಾರೆ 7ನೇ ಶತಕ ಸಿಡಿಸಿದ್ದರು. ಕೊಹ್ಲಿ ಶತಕದ ಮೂಲಕ ಆರ್ಸಿಬಿ ಎದುರಾಳಿ ತಂಡಕ್ಕೆ 198 ರನ್ ಗುರಿ ನೀಡಿತ್ತು. ಆದರೆ, ಶುಭಮನ್ ಗಿಲ್ (104*) ಶತಕದ ಬಲದಿಂದ ಗುಜರಾತ್, ಇನ್ನೂ 5 ಎಸೆತಗಳು ಬಾಕಿ ಇರುವಾಗಲೇ ಗೆದ್ದು ಬೀಗಿತು. ಆ ಮೂಲಕ ಆರ್ಸಿಬಿಯ ಐಪಿಎಲ್ ಪ್ಲೇಆಫ್ ಕನಸು ಭಗ್ನವಾಯಿತು.2023ರ ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿಯ ವೈಫಲ್ಯಕ್ಕೆ ಪ್ರಮುಖ 6 ಕಾರಣಗಳು
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/QR7kcXo
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...