ಕಾನೂನಿಗೆ ಗೌರವಕೊಟ್ಟು ಧ್ವನಿವರ್ಧಕದಲ್ಲಿ ಅಜಾನ್‌ ಹೊರಡಿಸೋದನ್ನು ನಿಲ್ಲಿಸಬೇಕು: ಪ್ರಮೋದ್‌ ಮುತಾಲಿಕ್‌

ಕುಂದಾಪುರದ ವಠಾರದಲ್ಲಿನ ಮಸೀದಿಯೊಂದರಲ್ಲಿ ಸುಪ್ರೀಂಕೋರ್ಟ್‌ನ ಆದೇಶ ಪಾಲನೆಯಾಗುತ್ತಿಲ್ಲ. ಹಿಂದೂ ಹಬ್ಬಗಳಲ್ಲಿ ಡಿಜೆ ಹಾಕಿದರೆ ಕಷ್ಟ ಎನ್ನುವ ಅಧಿಕಾರಿಗಳು ಸುಪ್ರೀಂಕೋರ್ಟ್‌ನ ಆದೇಶ ಪಾಲಿಸಲು ಹಿಂದೇಟು ಹಾಕುತ್ತಿರುವುದು ಏಕೆ? ಜಿಲ್ಲೆಯ ಎಸ್ಪಿ, ಡಿಸಿ ಅವರಿಗೆ ಆದೇಶ ಪಾಲಿಸಲು ಆಗದಿದ್ದಲ್ಲಿ ಶ್ರೀರಾಮ ಸೇನೆ ಮೈಕ್‌ ಕೀಳುವ ಅಭಿಯಾನ ನಡೆಸಲಿದೆ. ನಾವು ಪ್ರಾರ್ಥನೆಯ ವಿರೋಧಿಗಳಲ್ಲ. ಪ್ರಾರ್ಥನೆಯ ಹೆಸರಿನಲ್ಲಿ ಇನ್ನೊಬ್ಬರಿಗೆ ಕಿರಿಕಿರಿ ಉಂಟು ಮಾಡಲು ಬಿಡುವುದಿಲ್ಲ. ನೆಲದ ಕಾನೂನಿಗೆ ಗೌರವಕೊಟ್ಟು ಧ್ವನಿವರ್ಧಕ ಮೂಲಕ ಅಜಾನ್‌ ಹೊರಡಿಸುವುದನ್ನು ನಿಲ್ಲಿಸಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.

from India & World News in Kannada | VK Polls https://ift.tt/9pquDx1

ಬಾಲಕರ ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಆರೋಪಿಯ ವಿರುದ್ಧ ಸೈಬರ್‌ ಟಿಪ್‌ಲೈನ್‌ನಿಂದ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆಗಿನ ತನಿಖಾಧಿಕಾರಿ ಸಿಇಎನ್‌ ಪಿಐ ಕೆ.ಟಿ ಗುರುರಾಜ್‌ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಸರಕಾರಿ ಅಭಿಯೋಜಕ ಹರಿಪ್ರಸಾದ್‌ ಅವರು ಸರಕಾರದ ಪರವಾಗಿ ವಾದ ಮಂಡಿಸಿದ್ದರು.

from India & World News in Kannada | VK Polls https://ift.tt/BzGiMmN

Dakshina Kannada | ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ನಿರ್ಮಾಣ: ಕಾಗೆ ಗೂಡಿಗೂ ಬಂತು ಆಧುನಿಕತೆ ಸ್ಪರ್ಶ!

ಸುಳ್ಯ ತಾಲೂಕಿನ ಅಮರ ಮೂಡ್ನೂರು ಗ್ರಾಮದ ಚೊಕ್ಕಾಡಿಯ ಭಗವಾನ್‌ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರದ ಆವರಣದಲ್ಲಿ ಒಂದು ಮರ ಬೆಳೆಸಲಾಗಿತ್ತು. ಈ ಮರ ಅಪಾಯಕಾರಿ ಸ್ಥಿತಿಯಲ್ಲಿತ್ತು. ಮರದ ಗೆಲ್ಲನ್ನು ತೆರವುಗೊಳಿಸಲು ಮುಂದಾದಾಗ ಈ ಕೊಂಬೆಯಲ್ಲಿ ಎರಡು ಕಾಗೆಯ ಗೂಡುಗಳು ಪತ್ತೆಯಾಗಿವೆ. ಒಂದು ಗೂಡಿನಲ್ಲಿ ಕಾಗೆಗಳು ವಾಸವಿದ್ದರೆ, ಇನ್ನೊಂದು ಗೂಡಿನಲ್ಲಿದ್ದ ಕಾಗೆಗಳು ಹಾರಿ ಹೋಗಿದ್ದವು. ಈ ಗೂಡುಗಳನ್ನು ನೋಡಿದವರು ಅರೆ ಕ್ಷಣ ದಂಗಾಗಿ ಹೋಗಿದ್ದರು. ಕಾಗೆಯ ಗೂಡುಗಳು ಸುಮಾರು ಎರಡು ಕೆಜಿಯಷ್ಟು ಸಣ್ಣ-ಸಣ್ಣ ಕಬ್ಬಿಣದ ತಂತಿಗಳಿಂದಲೇ ಸಂಪೂರ್ಣವಾಗಿ ನಿರ್ಮಾಣವಾಗಿದ್ದವು.

from India & World News in Kannada | VK Polls https://ift.tt/p8qnoCM

ಡಿಡಿಗಳ ಮಡಿಲಿಗೆ ಶಾಲೆಗಳು: ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕಾಗಿ ನಾನಾ ತಂತ್ರ, ನಂ.1 ಸ್ಥಾನಕ್ಕಾಗಿ ಪೈಪೋಟಿ

ಈ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಸಾಕಷ್ಟು ಸುಧಾರಣೆ ಮೂಡಿಸಿದ್ದ ಡಿಸಿ ಆರ್‌.ಲತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯಕ್ಕೆ ನಂ.1 ಸ್ಥಾನಕ್ಕೇರಲು ನಾನಾ ಪ್ರಯತ್ನ ಆರಂಭಿಸಿದ್ದಾರೆ. ಜಿಲ್ಲಾಪಂಚಾಯಿತಿ ವ್ಯಾಪ್ತಿಯ ಎಲ್ಲಾ ಇಲಾಖೆ ಉಪನಿರ್ದೇಶಕರಿಗೆ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲೆಯಲ್ಲೊಂದು ಶಾಲೆ ದತ್ತು ಪಡೆಯಲು ಸೂಚಿಸುತ್ತಿದ್ದಾರೆ. ಅಧಿಕಾರಿಗಳು ಆಗಾಗ ಶಾಲೆಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಪರೀಕ್ಷಾ ಸಿದ್ಧತೆ ಪರಿಶೀಲಿಸಲು ವ್ಯವಸ್ಥೆ ರೂಪಿಸಲಾಗಿದೆ.

from India & World News in Kannada | VK Polls https://ift.tt/i6DPobs

Mangaluru News | ಅಂಜಲ್, ಬಂಗುಡೆ ಭಾರಿ ಅಗ್ಗ: ಬೋಟ್‌ ಮಾಲೀಕರಿಗೆ ನಷ್ಟ, ಮೀನುಪ್ರಿಯರು ಖುಷ್‌

''ಕರಾವಳಿಯಾದ್ಯಂತ ಅಂಜಲ್‌, ಬಂಗುಡೆ, ಬೊಳೆಂಜಿರ್‌, ಫಿಶ್‌ ಮೀಲ್‌ಗೆ ಹೋಗುವ ಚಮ್ಮೀನ್‌ ಇತ್ಯಾದಿ 25-30 ಟನ್‌ ಬಂದಿದೆ. ಈಗ ನವರಾತ್ರಿ ಸಂದರ್ಭ ಹಿಂದುಗಳು ಮೀನು ತಿನ್ನಲು ಕೊಂಡೊಯ್ಯುವುದು ಕಡಿಮೆ. ಸಾಮಾನ್ಯವಾಗಿ ಈಗಿನ ತಾಜಾ ಬಂಗುಡೆ ಫ್ರೀಝಿಂಗ್‌ಗೆ ಕೊಂಡೊಯ್ಯುವುದು ವಾಡಿಕೆ. ಈ ಬಾರಿ ಕೊಂಡೊಯ್ಯದೆ, ರಫ್ತೂ ಆಗದೆ ಬಂಗುಡೆ ದರ ನೆಲಕಚ್ಚಿದೆ. ರಫ್ತಾಗುವ ಬೊಂಡಾಸ್‌, ಕಪ್ಪೆ ಬೊಂಡಾಸ್‌ ಮಾತ್ರ ರಫ್ತಾಗುತ್ತಿದೆ'' ಎನ್ನುತ್ತಾರೆ ಮೀನುಗಾರರ ಮುಖಂಡ ನಿತಿನ್‌ ಕುಮಾರ್‌.

from India & World News in Kannada | VK Polls https://ift.tt/4JvYPM0

ರಸ್ತೆ ಗುಂಡಿ ಮುಚ್ಚುವುದು ಕಾಗದದಲ್ಲೇ ಇದೆ: ಒತ್ತುವರಿ ತೆರವು ವಿಳಂಬಕ್ಕೆ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು ನಗರದಲ್ಲಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್‌ ಮೆನನ್‌ ಸಲ್ಲಿಸಿರುವ ಪಿಐಎಲ್‌ ಹಂಗಾಮಿ ಸಿಜೆ ಅಲೋಕ್‌ ಅರಾಧೆ ನೇತೃತ್ವದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಸ್ತುಸ್ಥಿತಿ ವರದಿ ಸಲ್ಲಿಸಿ, ''2022ರ ಸೆಪ್ಟೆಂಬರ್‌ 19ರಿಂದ ಈವರೆಗೆ 10 ಒತ್ತುವರಿ ತೆರವುಗೊಳಿಸಲಾಗಿದೆ. ಇನ್ನೂ 592 ಒತ್ತುವರಿ ತೆರವುಗೊಳಿಸಬೇಕಾಗಿದೆ. ಎಲ್ಲಾ ಒತ್ತುವರಿಗಳನ್ನು ತೆರವು ಮಾಡಲು ಇನ್ನೂ ಸ್ವಲ್ಪ ಕಾಲಾವಕಾಶ ನೀಡಬೇಕು'' ಎಂದು ಕೋರಿದರು.

from India & World News in Kannada | VK Polls https://ift.tt/uWSeBh6

PAK vs ENG: ವಿರಾಟ್‌ ಕೊಹ್ಲಿ ದಾಖಲೆ ಸರಿಗಟ್ಟಿದ ಬಾಬರ್‌ ಆಝಮ್‌!

Pakistan vs England T20 Cricket Series 2022: ಇಂಗ್ಲೆಂಡ್‌ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯ 6ನೇ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಕ್ಯಾಪ್ಟನ್‌ ಹಾಗೂ ಆರಂಭಿಕ ಬ್ಯಾಟ್ಸ್‌ಮನ್‌ ಬಾಬರ್‌ ಆಝಮ್‌ ಭರ್ಜರಿ ಅರ್ಧಶತಕ ಬಾರಿಸಿದ್ದಾರೆ. 59 ಎಸೆತಗಳಲ್ಲಿ ಅಜೇಯ 87 ರನ್‌ ಸಿಡಿಸಿದ ಬಾಬರ್‌ ಆಝಮ್‌, ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 3 ಸಾವಿರ ರನ್‌ಗಳ ಗಡಿ ದಾಟಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/dt8rAFl

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...